ಅನಧಿಕೃತ ಮತ್ತು ಶಿಥಿಲಾವಸ್ಥೆಯ ಕಟ್ಟಡಗಳ ತೆರವು ಕಾರ್ಯಾಚರಣೆ.. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಅಕ್ಟೋಬರ್,25,2024 (www.justkannada.in): ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹಿನ್ನೆಲೆಯಲ್ಲಿ  ಅದರಂತೆ ಅಧಿಕಾರಿಗಳು ಸರ್ವೇ ನಡೆಸಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡವನ್ನು ಗುರುತಿಸಿ, ವಲಯ ಆಯುಕ್ತರಾದ ರಮೇಶ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ಕೆ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಮಹದೇವಪುರ ವಲಯ ಹೊರಮಾವು ವ್ಯಾಪ್ತಿಯ ನಂಜಪ್ಪ ಗಾರ್ಡನ್ 4ನೇ ಅಡ್ಡ ರಸ್ತೆಯಲ್ಲಿ ಬರುವ ಸರ್ವೇ ಸಂಖ್ಯೆ 54/1 ರಲ್ಲಿ ಪುಟ್ಟಪ್ಪ ಎಂಬ ಮಾಲೀಕರು 10 X 25 ರಷ್ಟು ಅಡಿಯಲ್ಲಿ ಕಟ್ಟಡ ನಿರ್ಮಾಣ ಹಂತದಲ್ಲಿರುವ ನೆಲಮಡಿ + 5 ಅಂತಸ್ತಿನ ಕಟ್ಟಡವು ಬಿರುಕು ಬಿಟ್ಟಿದ್ದು, ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ:

ಹೆಚ್.ಎ.ಎಲ್ ವಾರ್ಡ್ ಇಸ್ಲಾಂಪುರದಲ್ಲಿ ಶ್ರೀರಾಂ ಎಂಬ ಮಾಲೀಕರ ನೆಲಮಹಡಿ + ಮೊದಲಹಡಿಯು ಹಳೆಯ ಕಟ್ಟಡವಾಗಿದ್ದು, ಶಿಥಿಲಾವಸ್ಥೆಯಲ್ಲಿರುವ ಕಾರಣ ಮನೆಯಲ್ಲಿದ್ದ ಸಾಮಗ್ರಿಗಳನ್ನೆಲ್ಲಾ ತೆಗೆದು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

Key words: Clearance operation,dilapidated, buildings, Bangalore

Font Awesome Icons

Leave a Reply

Your email address will not be published. Required fields are marked *