RTI ಕಾರ್ಯಕರ್ತ ಗಂಗರಾಜುಗೆ ಇಡಿ ನೋಟಿಸ್ : ಇಂದು ವಿಚಾರಣೆಗೆ ಹಾಜರು » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಅಕ್ಟೋಬರ್,28,2024 (ww.justkannada.in): ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರ್ ಟಿಐ ಕಾರ್ಯಕರ್ತ ಗಂಗರಾಜುಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ  ಲೋಕಾಯುಕ್ತ  ತನಿಖೆ ನಡೆಸುತ್ತಿದ್ದರೆ, ಮತ್ತೊಂದೆಡೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ವಿಚಾರವಾಗಿ ಮತ್ತಷ್ಟು ದಾಖಲೆ ಕೇಳಿ ಆರ್‌ಟಿಐ ಕಾರ್ಯಕರ್ತ ಗಂಗರಾಜುಗೆ  ಇಡಿ ನೋಟೀಸ್ ನೀಡಿದ್ದು, ಇಂದು ಅಧಿಕಾರಿಗಳ ಎದುರು ಅವರು ಹಾಜರಾಗಲಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಇಡಿ ಕಚೇರಿಗೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ದಾಖಲೆ ಸಮೇತ ಹಾಜರಾಗಲಿದ್ದಾರೆ.  ಈ ಹಿಂದೆ ಮುಡಾ ವಿಚಾರವಾಗಿ ಗಂಗರಾಜು ಅವರು ದೂರು ನೀಡಿದ್ದರು. ದಾಖಲೆ ಸಮೇತ ಕೆಲವು ಆರೋಪಗಳನ್ನು ಮಾಡಿದ್ದರು. ಈ ಹಿನ್ನಲೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

Key words: MUDA scam, ED, Notice, RTI activist Gangaraju

Font Awesome Icons

Leave a Reply

Your email address will not be published. Required fields are marked *