ಬಾಲಿವುಡ್ ನಟಿ ಪರಿಣಿತ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ಇಂದು (ಸೆ.24) ದಾಂಪತ್ಯ ಜೀವನಕ್ಕೆ ಕಾಲಿರಿಸಲು ಸಿದ್ದರಾಗಿದ್ದಾರೆ. ಅದ್ದೂರಿ ವಿವಾಹ ಮಹೋತ್ಸವಕ್ಕೆ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್ ಅದ್ಭುತವಾಗಿ ಅಲಂಕಾರಗೊಂಡಿದೆ.
ತಾಜ್ ಲೇಕ್ ಪ್ಯಾಲೇಸ್ನಲ್ಲಿ ಕೆಲವು ಶಾಸ್ತ್ರಗಳನ್ನು ನಿಗದಿಪಡಿಸಲಾಗಿದೆ. ಹಲವಾರು ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ರಾಜಕಾರಣಿಗಳು ರಾಯಲ್ ವೆಡ್ಡಿಂಗ್ನಲ್ಲಿ ಭಾಗವಹಿಸಲು ಉದಯಪುರಕ್ಕೆ ಆಗಮಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಸಂಜೆ ಉದಯಪುರ ತಲುಪಿದ್ದು, ಇಬ್ಬರು ಭಾನುವಾರ ರಾಘವ್ ಚಡ್ಡಾ ಅವರ ಬಾರಾತ್ನಲ್ಲಿ ಭಾಗವಹಿಸಲಿದ್ದಾರೆ.
ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಹಲವಾರು ವರ್ಷಗಳಿಂದ ಪರಸ್ಪರ ಪರಿಚಿತರಾಗುದ್ದು, ಕಳೆದ ಮೇ ತಿಂಗಳಲ್ಲಿ ದೆಹಲಿಯ ರಾಘವ್ ಅವರ ಕಪುರ್ತಲಾ ಹೌಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.