ಬೆಂಗಳೂರು: ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ, ಅವರು ಹೋದದ್ದು ಅತಿಥಿಯಾಗಿ ಅಷ್ಟೆ. ಚಿಕ್ಕಬಳ್ಳಾಪುರ ಜನಪ್ರಿಯ ಮಾತನಾಡುವ ಶಾಸಕ ಎಂದೇ ಖ್ಯಾತರಾಗಿರುವ ಪ್ರದೀಪ್ ಈಶ್ವರ್ ಅಚ್ಚರಿ ಎನ್ನುವಂತೆ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿರುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ನಿಂದ ಬಂದ ಹಣವನ್ನ ಅಪ್ಪಅಮ್ಮನಿಲ್ಲದ ಮಕ್ಕಳಿಗೆ ನೀಡಲು ನಿರ್ಧಾರ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ಆದರೆ, ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರೋ ವಿಚಾರವನ್ನು ಹಲವರು ಪ್ರಶ್ನೆ ಮಾಡಿದ್ದಾರೆ. ಜನಪ್ರತಿನಿಧಿಯಾಗಿ ಇಂತಹ ವೇಳೆಯಲ್ಲಿ ರಿಯಾಲಿಟಿ ಶೋಗೆ ಹೋಗಬಹುದಾ ಎಂದು ಹಲವರು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರೆ. ಆದರೀಗ ಅವರು ಬಿಗ್ ಬಾಸ್ ಮನೆಯಿಂದ ಹೊರನಡೆದಿದ್ದಾರೆ.