“ಸೂಪರ್​ ಸ್ಟಾರ್​” ಕೃಷ್ಣ ಪ್ರತಿಮೆ ಅನಾವರಣ ಮಾಡಿದ ಕಮಲ್​ ಹಾಸನ್

ವಿಜಯವಾಡ: ತೆಲುಗು ಚಿತ್ರರಂಗಕ್ಕೆ ಕೃಷ್ಣ ಅವರು ನೀಡಿದ ಕೊಡುಗೆ ಅಪಾರ. ಅಭಿಮಾನಿಗಳಿಂದ ಪ್ರೀತಿಯಿಂದ ‘ಸೂಪರ್​ ಸ್ಟಾರ್​’ ಎಂದು ಬಿರುದು ಪಡೆದ ಅವರು ಹಲವು ಬಗೆಯ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿದ್ದರು. ಕಳೆದ ವರ್ಷ ಅವರು ಹೃದಯಾಘಾತದಿಂದ ನಿಧನರಾದರು. ಈಗ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

ವಿಜಯವಾಡದಲ್ಲಿ ನಿರ್ಮಾಣ ಆಗಿರುವ ಈ ಪ್ರತಿಮೆಯನ್ನು ತಮಿಳಿನ ಖ್ಯಾತ ನಟ ಕಮಲ್​ ಹಾಸನ್​ ಅವರು ಅನಾವರಣ ಮಾಡಿದ್ದಾರೆ. ಈ ಮೂಲಕ ಅವರು ಗೌರವ ಸಲ್ಲಿಸಿದ್ದಾರೆ. ಕಮಲ್​ ಹಾಸನ್​ ಅವರಿಗೆ ಮಹೇಶ್​ ಬಾಬು ಧನ್ಯವಾದ ತಿಳಿಸಿದ್ದಾರೆ. ಪ್ರತಿಮೆ ಅನಾವರಣದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Font Awesome Icons

Leave a Reply

Your email address will not be published. Required fields are marked *