ವಿಜಯವಾಡ: ತೆಲುಗು ಚಿತ್ರರಂಗಕ್ಕೆ ಕೃಷ್ಣ ಅವರು ನೀಡಿದ ಕೊಡುಗೆ ಅಪಾರ. ಅಭಿಮಾನಿಗಳಿಂದ ಪ್ರೀತಿಯಿಂದ ‘ಸೂಪರ್ ಸ್ಟಾರ್’ ಎಂದು ಬಿರುದು ಪಡೆದ ಅವರು ಹಲವು ಬಗೆಯ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿದ್ದರು. ಕಳೆದ ವರ್ಷ ಅವರು ಹೃದಯಾಘಾತದಿಂದ ನಿಧನರಾದರು. ಈಗ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ವಿಜಯವಾಡದಲ್ಲಿ ನಿರ್ಮಾಣ ಆಗಿರುವ ಈ ಪ್ರತಿಮೆಯನ್ನು ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರು ಅನಾವರಣ ಮಾಡಿದ್ದಾರೆ. ಈ ಮೂಲಕ ಅವರು ಗೌರವ ಸಲ್ಲಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಮಹೇಶ್ ಬಾಬು ಧನ್ಯವಾದ ತಿಳಿಸಿದ್ದಾರೆ. ಪ್ರತಿಮೆ ಅನಾವರಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.